ದ್ವೇಷ ಭಾಷಣಕ್ಕೆ ಕಡಿವಾಣ – ದೂರು ದಾಖಲು

ಮಂಗಳೂರು : ಪುತ್ತೂರಿನಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮವೊಂದರಲ್ಲಿ ಡಾ. ಪ್ರಸಾದ್ ಭಂಡಾರಿ ದ್ವೇಷಪೂರಿತ ಭಾಷಣ ಮಾಡಿದ್ದಾರೆಂದು ಆರೋಪಿಸಿರುವ ಮಂಗಳೂರು ಧರ್ಮ ಪ್ರಾಂತ ಮತ್ತು ಕ್ಯಾಥೋಲಿಕ್ ಚರ್ಚ್ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ. ಬಿಷಪ್ ಮತ್ತು ಕ್ಯಾಥೋಲಿಕ್ ಚರ್ಚ್ ಪರವಾಗಿ ಮಂಗಳೂರು ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಧಿಕಾರಿ ಫಾ. ಡಾ. ಜೆಬಿ ಸಾಲ್ದಾನ ಮತ್ತು ರೊಯ್ ಕ್ಯಾಸ್ಟಲಿನೊ ಹಾಗೂ ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ಅಧ್ಯಕ್ಷ ಸ್ಟಾನಿ ಲೋಬೊ ದೂರು ನೀಡಿದ್ದಾರೆ. ಸಭಾದ ಪದಾಧಿಕಾರಿಗಳು ನಿಯೋಗದಲ್ಲಿದ್ದರು.

LEAVE A REPLY

Please enter your comment!
Please enter your name here