ರಾಜಸ್ಥಾನದಲ್ಲಿ ಪುನೀತ್ ‌ಕೆರೆಹಳ್ಳಿ ಆಂಡ್ ಟೀಂ ಬಂಧನ

ಮಂಗಳೂರು: ಕನಪುರದ ಸಾತನೂರು ಬಳಿ ಜಾನುವಾರು ವ್ಯಾಪಾರಿ ಇದ್ರಿಸ್ ಪಾಶಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ‌ಕೆರೆಹಳ್ಳಿ ಬಂಧನವಾಗಿದೆ. ಕಳೆದ ಐದು ದಿನಗಳಿಂದ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ಸಾತನೂರು ಠಾಣೆ ಪೊಲೀಸರು ಏ.5 ಇಂದು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾರ್ಚ್ 31 ರಂದು ಪುನೀತ್ ಕೆರೆಹಳ್ಳಿ ಹಾಗೂ ತಂಡ ಗೋವುಗಳನ್ನು ಸಾಗಿಸುತ್ತದ್ದ ಕ್ಯಾಂಟರ್​ ತಡೆದು ಹಲ್ಲೆ ನಡೆಸಿದ್ದರು. ಮಾರನೇ ದಿನ  ಏ.​1ರಂದು ಕ್ಯಾಂಟರ್​ನಲ್ಲಿದ್ದ ಇದ್ರೀಷ್ ಪಾಷ ಶವವಾಗಿ ಪತ್ತೆಯಾಗಿದ್ದರು. ಈ ಸಂಬಂಧ ಮೃತನ ಸಹೋದರ ಸಾತನೂರು ‌ಠಾಣೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರರ ವಿರುದ್ಧ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 341, 504, 506, 324, 302, 34 ರ ಅಡಿ ಕೇಸ್ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಕಳೆದ ಐದು ದಿನದಿಂದ ಪುನೀತ್ ಅಂ‌ ಡ್ ಟೀಂ ತಲೆ ಮರೆಸಿಕೊಂಡಿತ್ತು.  ಆರೋಪಿಗಳನ್ನು ಬಂಧಿಸಲು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ನಾಲ್ಕು ತಂಡಗಳನ್ನು ರಚಿಸಿದ್ದರು. ಇದೀಗ ಅಂತಿಮವಾಗಿ ಪೊಲೀಸರು ರಾಜಸ್ಥಾನದಲ್ಲಿ ಆರೋಪಿಗಳ  ಹೆಡೆ ಮುರಿ ಕಟ್ಟಿ ರಾಮನಗರಕ್ಕೆ ಕರೆ ತರುತ್ತಿದ್ದಾರೆ.

LEAVE A REPLY

Please enter your comment!
Please enter your name here