ಚುನಾವಣೆ ಹಿನ್ನೆಲೆ ಜಿಲ್ಲೆಗೆ ಬಂದ 4 ಸಿಆರ್‌ಪಿಎಫ್ ತುಕಡಿಗಳು

ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್  ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂದಿಸಿದಂತೆ ಕರ್ತವ್ಯ ನಿರ್ವಹಿಸಲು ಮೊದಲ ಹಂತದಲ್ಲಿ 4 ಸಿಆರ್‌ಪಿಎಫ್ ತುಕಡಿಗಳು ಆಗಮಿಸಿವೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಾಟೆ ತಿಳಿಸಿದ್ದಾರೆ.

ಈ 4 ಸಿಆರ್‌ಪಿಎಫ್ ತುಕಡಿಗಳನ್ನು ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾರ್ಯಾಚರಿಸಲು ನಿಯೋಜನೆ ಮಾಡಲಾಗಿದೆ. ಇನ್ನಷ್ಟು ತುಕಡಿಗಳು ಚುನಾವಣೆ ಕರ್ತವ್ಯಕ್ಕೆ ಆಗಮಿಸಲಿವೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here