ರೈಲಿಗೆ ಬೆಂಕಿ – ಮೂವರ ಸಾವಿಗೆ ಕಾರಣವಾದ ಆರೋಪಿ ಬಂಧನ

ಮಂಗಳೂರು: ಸಹ ಪ್ರಯಾಣಿಕರೊಂದಿಗೆ ಜಗಳವಾಡಿ ರೈಲಿಗೆ ಬೆಂಕಿ ಹಚ್ಚಿ ಮೂವರ ಸಾವಿಗೆ ಕಾರಣವಾಗಿದ್ದ ಆರೋಪಿಯನ್ನು ಕೇಂದ್ರ ಗುಪ್ತಚರ ಮತ್ತು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ಅಧಿಕಾರಿಗಳ ಜಂಟಿ ತಂಡ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಬಂಧಿಸಿದೆ.

ಕೇರಳ ಪೊಲೀಸರ ತಂಡ ರತ್ನಗಿರಿ ತಲುಪಿದ್ದು ಆರೋಪಿಯನ್ನು ಶೀಘ್ರದಲ್ಲಿಯೇ ಅವರಿಗೆ ಹಸ್ತಾಂತರಿಸಲಾಗುವುದು ಎಂದು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹದಳದ ಅಧಿಕಾರಿ ತಿಳಿಸಿದ್ದಾರೆ. ಕ್ಯಾಲಿಕಟ್ ಜಿಲ್ಲೆಯ ಎಳತ್ತೂರು ಬಳಿ ಆಲಪ್ಪುಳ – ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸಹ ಪ್ರಯಾಣಿಕರೊಂದಿಗಿನ ಜಗಳದ ಬಳಿಕ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. 

LEAVE A REPLY

Please enter your comment!
Please enter your name here