ಬೆಂಗಳೂರು ಕರಗದ ವೇಳೆ ಅಗ್ನಿ ದುರಂತ- 20 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ

ಮಂಗಳೂರು: ಇತಿಹಾಸ ಪ್ರಸಿದ್ಧ ಬೆಂಗಳೂರು ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕರಗ ಆಚರಣೆಯ ಸಂದರ್ಭದಲ್ಲಿ ಭಕ್ತರು ಭಾರಿ ಪ್ರಮಾಣದ ಕರ್ಪೂರಕ್ಕೆ ಬೆಂಕಿ ಹಚ್ಚಿದ್ದ ಪರಿಣಾಮ, ರಸ್ತೆ ಬದಿ ನಿಲ್ಲಿಸಲಾಗಿದ್ದ ಕೆಲ ವಾಹನಗಳಗೆ ಬೆಂಕಿ ಹೊತ್ತಿಕೊಂಡಿದೆ. 

ಇಲ್ಲಿನ ಎನ್.ಆರ್.ಸಿಗ್ನಲ್‍ನಿಂದ ಧರ್ಮರಾಯ ದೇವಸ್ಥಾನದವರೆಗೆ ಸುಮಾರು 700 ಮೀಟರ್ ದೂರದವರೆಗೆ ಭಕ್ತರು ಕರ್ಪೂರ ಹಚ್ಚಿದ್ದರು. ಈ ವೇಳೆ ಗಾಳಿಯಿಂದ ಏಕಾಏಕಿ ಭಾರಿ ಪ್ರಮಾಣದಲ್ಲಿ ಬೆಂಕಿ ಆವರಿಸಿಕೊಂಡು ನೋಡು ನೋಡುತ್ತಿದ್ದಂತೆ 20ಕ್ಕೂ ಹೆಚ್ಚು ಬೈಕ್ ಹಾಗೂ ಆಟೊಗಳಿಗೆ ತಗುಲಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಫಲ ನೀಡಲಿಲ್ಲ.

ಅನಂತರ, ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಅಗ್ನಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ ಕರ್ಪೂರ ಉರಿಸುವ ಸಮಯದಲ್ಲಿ ರಸ್ತೆ ಬದಿ ವಾಹನಗಳನ್ನು ಪಾರ್ಕ್‌ ಮಾಡದಂತೆ ಕೇಳಿಕೊಂಡಿದ್ದರೂ ಮನವಿಯನ್ನು ನಿರ್ಲಕ್ಷಿಸಿ ಹಲವರು ತಮ್ಮ ವಾಹನಗಳನ್ನು ಪಾರ್ಕ್‌ ಮಾಡಿದ್ದರು.

LEAVE A REPLY

Please enter your comment!
Please enter your name here