ಮಹಿಳೆಯೊಂದಿಗಿನ ಶಾಸಕರ ಫೋಟೋ ಪ್ರಕರಣ – ನ್ಯಾಯಾಲಯದಿಂದ ತಡೆಯಾಜ್ಞೆ

ಮಂಗಳೂರು: ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಸಂಜೀವ ಮಠಂದೂರು ಕುರಿತು ಯಾವುದೇ ಮಾನಹಾನಿಕರ ಲೇಖನಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತನ್ನ ಕುರಿತು ಮಾನಹಾನಿಕರ ವರದಿ ಪ್ರಸಾರ ಮಾಡುವುದು, ವೆಬ್ ಹೋಸ್ಟಿಂಗ್ ಮತ್ತು ಹಂಚಿಕೊಳ್ಳುವುದನ್ನು ನಿಷೇಧಿಸಲು ಶಾಶ್ವತ ತಡೆಯಾಜ್ಞೆ ನೀಡುವಂತೆ ಶಾಸಕ ಸಂಜೀವ ಮಠಂದೂರು ಅವರು ಬೆಂಗಳೂರಿನ ಸಿಟಿ ಸಿವಿಲ್  ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಸಂಜೀವ ಮಠಂದೂರು ಪರ ನ್ಯಾಯವಾದಿಗಳ ವಾದ ಪುರಸ್ಕರಿಸಿ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ ಮತ್ತು ಜೂನ್ 26ಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ.

LEAVE A REPLY

Please enter your comment!
Please enter your name here