ಥ್ರೆಡ್ ಹೌಸ್ ಮಾಲಕ ನೇಣು ಬಿಗಿದು ಆತ್ಮಹತ್ಯೆ 

ಮಂಗಳೂರು : ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಮೂಲತಃ ಸೇವಂತಿಗುಡ್ಡೆ ನಿವಾಸಿಯಾಗಿದ್ದು ಪ್ರಸ್ತುತ ಕನೀರುತೋಟದಲ್ಲಿ ವಾಸವಿದ್ದ ಪ್ರವೀಣ್ ಆಳ್ವ ಎಂಬವರು ತಮ್ಮ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಪ್ರವೀಣ ಆಳ್ವ ಬೆಳಿಗ್ಗೆ 6.30 ರ ವೇಳೆಗೆ ಮನೆಯಿಂದ ಹೊರಟಿದ್ದು ಅಂಗಡಿ ಒಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿ ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆಯಲಾಗಿದೆ. ಮೃತರು ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಟೈಲರ್ ಅಂಗಡಿಗಳಿಗೆ ಬೇಕಾದ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಯನ್ನು ಕಳೆದ 7-8 ವರ್ಷಗಳಿಂದ ನಡೆಸುತ್ತಿದ್ದರು.

LEAVE A REPLY

Please enter your comment!
Please enter your name here