ಬಿಜೆಪಿ ಅಂತಿಮ ಪಟ್ಟಿ ಇಂದು ಪ್ರಕಟ ಸಾಧ್ಯತೆ?

ಮಂಗಳೂರು: ಬಿಜೆಪಿಯ ಮೂರನೇ ಹಾಗೂ ಅಂತಿಮ ಪಟ್ಟಿ ಇಂದು ಪ್ರಕಟವಾಗುವ ಸಾಧ್ಯತೆ ಇದೆ. ಬಿಜೆಪಿ 12 ಕ್ಷೇತ್ರಗಳ ಪಟ್ಟಿಯನ್ನು ಹೈಕಮಾಂಡ್ ಅಂತಿಮಗೊಳಿಸಿದೆ.

ಈಗಾಗಲೇ ಬಿಜೆಪಿ ಪಾಳಯದಿಂದ ಹಲವು ಟಿಕೆಟ್ ವಂಚಿತ ಆಕಾಂಕ್ಷಿಗಳು ಬಂಡಾಯದ ಧ್ವನಿ ಎತ್ತಿದ್ದು, ಇನ್ನಷ್ಟು ಆಕಾಂಕ್ಷಿಗಳು ಬಂಡಾಯವೇಳುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನೊಂದೆಡೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಟಿಕೆಟ್ ಕೈತಪ್ಪಿದ್ದು, ತಮ್ಮ ಮಗ ಕಾಂತೇಶ್ ಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಅದೇ ರೀತಿ ಗೋವಿಂದರಾಜನಗರ ಕ್ಷೇತ್ರಕ್ಕೆ ತಮ್ಮ ಮಗ ಅರುಣ್ ಸೋಮಣ್ಣನಿಗೆ ಟಿಕೆಟ್ ನೀಡುವಂತೆ ವಸತಿ ಸಚಿವ ಸೋಮಣ್ಣ ಪಟ್ಟು ಹಿಡಿದಿದ್ದಾರೆ.

LEAVE A REPLY

Please enter your comment!
Please enter your name here