ಮಾಧ್ಯಮ ಮತ್ತು ಪೊಲೀಸರ ಎದುರೇ ಗುಂಡಿಕ್ಕಿ ಹತ್ಯೆ

ಮಂಗಳೂರು (ಪ್ರಯಾಗ್ ರಾಜ್ – ಉತ್ತರ ಪ್ರದೇಶ್): ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ ರಾಜಕಾರಣಿ ಆತೀಕ್ ಅಹಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ಶನಿವಾರ ರಾತ್ರಿ ಹತ್ಯೆ ಮಾಡಲಾಗಿದೆ.

ಮಾಧ್ಯಮ ಮತ್ತು ಪೊಲೀಸರ ಎದುರೇ ಪತ್ರಕರ್ತರ ಸೋಗಿನಲ್ಲಿದ್ದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ವೈದ್ಯಕೀಯ ತಪಾಸಣೆಗಾಗಿ ಈ ಇಬ್ಬರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿ ನಡೆಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸನ್ನಿ, ಲವಲೇಶ್ ಮತ್ತು ಅರುಣ್ ಎಂದು ಗುರುತಿಸಲಾಗಿದೆ. ಅತಿಕ್ ಅಹಮದ್ ಪುತ್ರ ಅಸದ್ ನನ್ನು ಉತ್ತರಪ್ರದೇಶ ವಿಶೇಷ ಕಾರ್ಯಪಡೆ ಪೊಲೀಸರು ಏಪ್ರಿಲ್ 13 ರಂದು ಎನ್ಕೌಂಟರ್ ಮಾಡಿದ ಬೆನ್ನಲ್ಲೇ ಈ ಗುಂಡಿನ ದಾಳಿ ನಡೆದಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here