ಯಾವುದೇ ಪರಿಣಾಮ ಎದುರಿಸುವ ಶಕ್ತಿ ಪಕ್ಷಕ್ಕೆ ಇದೆ – ಬಿಜೆಪಿ

ಮಂಗಳೂರು: ಟಿಕೆಟ್ ವಂಚಿತರ ಪಕ್ಷ ತ್ಯಾಗ ಹಾಗೂ ಬಹಿರಂಗ ಹೇಳಿಕೆಗಳ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಜೆಪಿ ಹೈಕಮಾಂಡ್ ಭಿನ್ನಮತ ಶಮನಕ್ಕಾಗಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಅವರನ್ನು ನಿಯೋಜಿಸಿದೆ.

ಟಿಕೆಟ್ ಹಂಚಿಕೆ ವಿಚಾರದಲ್ಲಿ ಸೃಷ್ಟಿಯಾಗಿರುವ ಬಂಡಾಯವನ್ನು ಸಾಧ್ಯವಾದಷ್ಟು ಶಮನ ಮಾಡಿ, ಆದರೆ ಯಾರ ಹಠಕ್ಕೂ ಮಣೆಯಬೇಡಿ ಎಂದು ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದೆ. ಸಚಿವ ಎಲ್ಲಾ ಜೋಷಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಮಾತುಕತೆ ನಡೆಸುವಂತೆ ಹೈಕಮಾಂಡ್ ಸೂಚಿಸಿದ್ದು, ಯಾವುದೇ ಕಾರಣಕ್ಕೂ ಹೈಕಮಾಂಡ್ ನಿರ್ಧಾರವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಹೀಗಾಗಿ ಬೆದರಿಕೆಗೆ ಮಣಿಯಬೇಡಿ ಪರಿಣಾಮವನ್ನು ಎದುರಿಸುವ ಶಕ್ತಿ ಪಕ್ಷಕ್ಕೆ ಇದೆ ಎಂದು ಸ್ಪಷ್ಟ ಸಂದೇಶವನ್ನು ಹೈಕಮಾಂಡ್ ರವಾನಿಸಿದೆ.

LEAVE A REPLY

Please enter your comment!
Please enter your name here