ವ್ಯಕ್ತಿಯನ್ನು ಕಚ್ಚಿ ಕೊಂದ ಬೀದಿ ನಾಯಿಗಳ ಗ್ಯಾಂಗ್

ಮಂಗಳೂರು (ಅಲಿಘಡ)  : ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿ ವಯೋ ವೃದ್ಧರೊಬ್ಬರನ್ನು‌ ಕಚ್ಚಿ ಎಳೆದಾಡಿ ಕೊಂದಿರುವ ಘಟನೆ ಅಲಿಘಡ ಮುಸ್ಲಿಂ ವಿಶ್ವವಿದ್ಯಾನಿಲಯದ  ಉದ್ಯಾನದಲ್ಲಿ ನಡೆದಿದೆ.


ಮೃತ ವ್ಯಕ್ತಿಯನ್ನು ಡಾ.ಸಬ್ದರ್ ಅಲಿ ಎಂದು ಗುರುತಿಸಲಾಗಿದೆ. ಸಂಜೆ ವೇಳೆ ಅಲಿಘಡ ಮುಸ್ಲಿಂ ವಿಶ್ವವಿದ್ಯಾ ನಿಲಯದ ಉದ್ಯಾನದಲ್ಲಿ ವಾಯುವಿಹಾರ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಡಾ.ಸಬ್ದರ್ ಅಲಿ ಅವರು ಉದ್ಯಾನದ ಒಂದೆಡೆ ನಿಂತುಕೊಂಡಿದ್ದ ವೇಳೆ ಬಂದ ಬೀದಿ ನಾಯಿಗಳ ಹಿಂಡು ದಾಳಿ ಮಾಡಿ, ನೆಲಕ್ಕುರುಳಿಸಿ ಮಾರಣಾಂತಿಕವಾಗಿ ಗಾಯಗೊಳಿಸಿದ್ದು ಡಾ.ಅಲಿ ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here