ಮಂಗಳೂರಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯ ಹತ್ಯೆ

ಮಂಗಳೂರು: ಬಂಟ್ವಾಳ ತಾಲೂಕಿನ ಕೊಳಲಿ ಮೂಲದ ವ್ಯಕ್ತಿಯು ಅವರನ್ನು ಮಂಗಳೂರಲ್ಲಿ ಹತ್ಯೆ ಮಾಡಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಹತ್ಯೆ ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಳಲಿ ಸಮೀಪದ ಅಮ್ಮುಂಜ ನಿವಾಸಿ ಜನಾರ್ದನ ಬಾರಿಂಜ ಕೊಲೆಯಾದ ವ್ಯಕ್ತಿ. ಮಂಗಳೂರು ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದ ವೇಳೆ ಅವರ ಕೊಲೆ ನಡೆದಿದೆ. ಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲವಾದರೂ ರಾಬರಿ ನಡೆಸಲು ಬಂದಿದ್ದ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿರುವ ಬಾರಿಂಜ ವೃತ್ತಿಯಲ್ಲಿ ಚಾಲಕರಾಗಿದ್ದಾರೆ.

LEAVE A REPLY

Please enter your comment!
Please enter your name here