ಏಪ್ರಿಲ್ 20 ಮತ್ತು 21ರಂದು ವಿಶ್ವ ಬೌದ್ಧ ಸಮ್ಮೇಳನ

ಮಂಗಳೂರು: ಏಪ್ರಿಲ್ 20 ಮತ್ತು 21 ರಂದು ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ವಿಶ್ವ ಬೌದ್ಧ ಸಮ್ಮೇಳನ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ವಿಶ್ವದ ವಿವಿಧ ದೇಶಗಳ ಪ್ರಮುಖ ಬೌದ್ಧ ಸನ್ಯಾಸಿಗಳು ತಜ್ಞರು ಮತ್ತು ಶಿಕ್ಷಣ ತಜ್ಞರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಬೌದ್ಧ ಸ್ಮಾರಕಗಳನ್ನು ಸಂರಕ್ಷಿಸುವುದು ಮತ್ತು ಅತ್ಯುತ್ತಮ ಬೌದ್ಧ ಚಿಂತಕರನ್ನು ಒಂದೇ ವೇದಿಕೆಯಲ್ಲಿ ತರುವುದು ಈ ಸಮ್ಮೇಳನದ ಉದ್ದೇಶವಾಗಿದೆ. ಈ ಸಮ್ಮೇಳನದಲ್ಲಿ ಸುಮಾರು 30 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದು ಇವರೆಲ್ಲ ಭಾರತದ ಬೌದ್ಧ ಸ್ಮಾರಕಗಳಿರುವ ವಿವಿಧ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಬೌದ್ಧ ಶೃಂಗ ಸಭೆಯನ್ನು ಉದ್ಘಾಟಿಸಲಿದ್ದಾರೆ.

LEAVE A REPLY

Please enter your comment!
Please enter your name here