ರಾಜ್ಯಕ್ಕೆ ಮತ್ತೆ ಮೋದಿ ಅಮಿತ್ ಶಾ ಭೇಟಿ

ಮಂಗಳೂರು (ಬೆಂಗಳೂರು):  ಬೆಂಗಳೂರು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ.

ಬಹುಮತ ಗಳಿಸಬೇಕೆಂಬ ಜಿದ್ದಿಗೆ ಬಿದ್ದಿರುವ ಬಿಜೆಪಿ ಕೇಂದ್ರ ನಾಯಕರನ್ನೇ ಪ್ರಚಾರಕ್ಕೆ ಅವಲಂಬಿಸಿದೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ ರಾಜ್ಯದಲ್ಲಿ ಪ್ರಚಾರ ಆರಂಭಿಸಿದ್ದು, ಏಪ್ರಿಲ್ 27ರಂದು ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಬರಲಿದ್ದಾರೆ. ಬೃಹತ್ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ ಎನ್ನಲಾಗಿದ್ದು ಸಮಾವೇಶಕ್ಕೆ ಜಾಗ ಮಾತ್ರ ಇನ್ನೂ ನಿಗದಿಯಾಗಿಲ್ಲ. ಮೋದಿ ಭಾಷಣವನ್ನು ರಾಜ್ಯದ 5000 ಕೇಂದ್ರಗಳಲ್ಲಿ ಪ್ರಸಾರ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಏಪ್ರಿಲ್ 21 ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದು ಚುನಾವಣಾ ಪ್ರಚಾರ ಮತ್ತು ರೋಡ್ ಶೋ ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here