ಮುಖ್ಯ ಮಂತ್ರಿ ಆಯ್ಕೆ ವಿಚಾರ – ನಾಳೆಗೆ ಮುಂದೂಡಿದ ಖರ್ಗೆ

ಮಂಗಳೂರು : ರಾಜ್ಯದ ಮುಖ್ಯ ಮಂತ್ರಿ ಆಯ್ಕೆ ವಿಚಾರವನ್ನು ನಾಳೆಗೆ ಮುಂದೂಡಲಾಗಿದೆ.

ದೆಹಲಿಯಲ್ಲಿ ಕೆ ಪಿ ಸಿ ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೊಂದಿಗೆ ಮೊದಲು ಸುದೀರ್ಘ ಮಾತುಕತೆ ನಡೆಸಿದ ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿಕ ಸಿದ್ದರಾಮಯ್ಯ ಅವರೊಂದಿಗೆ ಸುಧೀರ್ಘ ಮಾತುಕತೆ ನಡೆಸಿದ್ದರೂ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಈ ನಡುವೆ ಹಿಮಾಚಲ ಪ್ರದೇಶದ ಶಿಮ್ಲದಿಂದ ಸೋನಿಯಾ ಗಾಂಧಿ ದೆಹಲಿಗೆ ಹಿಂದಿರುಗಿದ್ದಾರೆ. ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಖರ್ಗೆ ಮನೆಗೆ ಭೇಟಿ ನೀಡಲಿರುವ ಸೋನಿಯಾ, ಖರ್ಗೆ ಜತೆ ಮಾತುಕತೆ ನಡೆಸಲಿದ್ದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಮಾತುಕತೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಗ್ಗಂಟಾಗಿರುವ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಮಾತುಕತೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದು ಮುಖ್ಯಮಂತ್ರಿ ಹೆಸರನ್ನು ನಾಳೆ ಘೋಷಿಸುವ ಸಾಧ್ಯತೆ ಇದೆ. ಸುಸೂತ್ರವಾಗಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಸಲು ನಾಯಕರು ಯಾವ ಸೂತ್ರ ಅನುಸರಿಸಲಿದ್ದಾರೆ ಎನ್ನುವುದು ಮಾತ್ರ ಇನ್ನೂ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here