ರಾಜ್ಯದ ನೂತನ ಪೊಲೀಸ್‌ ಮಹಾನಿರ್ದೇಶಕರಾಗಿ ಅಶೋಕ್‌ ಮೋಹನ್

ಮಂಗಳೂರು(ಬೆಂಗಳೂರು): ರಾಜ್ಯದ ನೂತನ ಪೊಲೀಸ್‌ ಮಹಾನಿರ್ದೇಶಕರಾಗಿ ಅಶೋಕ್‌ ಮೋಹನ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಡಾ.ಅಶೋಕ್‌ ಮೋಹನ್‌ 1987 ನೇ ಬ್ಯಾಚ್ ನ ಕರ್ನಾಟಕ ಕೇಡರ್‌ ಐಪಿಎಸ್‌ ಅಧಿಕಾರಿಯಾಗಿದ್ದು‌, ಸೇನಾ ಜೇಷ್ಠತೆ ಆಧಾರದಲ್ಲಿ ಡಿಜಿ-ಐಜಿ ಹುದ್ದೆಗೆ ನೇಮಿಸಲಾಗಿದೆ. 36 ವರ್ಷಗಳ ಸುಧೀರ್ಘ ಸೇನಾ ಅವಧಿಯಲ್ಲಿ ಅಗ್ನಿಶಾಮಕ ದಳ, ಕಾರಾಗ್ರಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ-ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 2025 ಎಪ್ರಿಲ್‌ ನಲ್ಲಿ ಸೇನಾ ನಿವೃತ್ತಿ ಹೊಂದಲಿದ್ದಾರೆ.

LEAVE A REPLY

Please enter your comment!
Please enter your name here