ಲಘು ವಿಮಾನ ಪತನ – ಪೈಲೆಟ್‌ ಪ್ರಾಣಾಪಾಯದಿಂದ ಪಾರು

ಮಂಗಳೂರು: ಚಾಮರಾಜನಗರ ಜಿಲ್ಲೆಯ ಭೋಗಪುರ ಬಳಿ ಲಘು ವಿಮಾನವೊಂದು ಪತನಗೊಂಡ ಘಟನೆ ನಡೆದಿದೆ.

ಮಧ್ಯಾಹ್ನ 12 ಗಂಟೆ ವೇಳೆಗೆ ಲಘುಜೆಟ್‌ ವಿಮಾನ ಪತನಗೊಂಡು ಹೊತ್ತಿ ಉರಿದಿದೆ.ವಿಮಾನದಲ್ಲಿದ್ದ ಇಬ್ಬರು ಪ್ಯಾರಾಚೂಟ್‌ ಬಳಸಿ ವಿಮಾನದಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಎಚ್‌ ಎ ಎಲ್‌ ನಿಲ್ದಾಣದಿಂದ ಟೇಕ್‌ ಆಫ್‌ ಆದ ವಿಮಾನ ಚಾಮರಾಜನಗರದ ಭೋಗಪುರ ಬಳಿ ಪತನಗೊಂಡಿದೆ. ವಿಮಾನ ಛಿದ್ರ ಛಿದ್ರವಾಗಿದ್ದು ಬಿಡಿ ಭಾಗಗಳು ಎಲ್ಲೆಂದರಲ್ಲಿ ಹರಡಿ ಬಿದ್ದಿದೆ.

LEAVE A REPLY

Please enter your comment!
Please enter your name here