17 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ – ಜಾಮೀನು

ಮಂಗಳೂರು: ಪ್ರಕರಣ ಒಂದಕ್ಕೆ ಸಂಬಂಧಪಟ್ಟಂತೆ 17 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದ್ದು ಸಂಜೆ ವೇಳೆಗೆ ಜಾಮೀನು ನೀಡಿ ಬಿಡುಗಡೆ ಮಾಡಲಾಗಿದೆ. ಬಂಧಿತ ಆರೋಪಿಯನ್ನು ಬಂಟ್ವಾಳದ ಮೇರ ಮಜಲು ಪಕ್ಕಾಲ ಪಡೆ ನಿವಾಸಿ ಜೇಸನ್ ಪೀಟರ್ ಡಿಸೋಜ ಎಂದು ಗುರುತಿಸಲಾಗಿದೆ. 420 ಕೇಸಿಗೆ ಸಂಬಂಧಪಟ್ಟಂತೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೂ ಸಿಗದೆ ತಲೆಮರೆಸಿಕೊಂಡಿದ್ದ . ನ್ಯಾಯಾಲಯವು ಎಲ್ಪಿಸಿ ಪ್ರಕರಣ ಎಂದು ವಾರೆಂಟ್ ಹೊರಡಿಸಿತ್ತು.

ಎಸಿಪಿ ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಪೀಟರ್ ಡಿಸೋಜಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಅದೇ ದಿನ ಜಾಮೀನು ನೀಡಿ ಬಿಡುಗಡೆ ಮಾಡಲಾಗಿದೆ. ಪೀಟರ್ ಪರ ಅಡ್ವಕೇಟ್ ಕಿಶೋರ್ ಡಿಸಿಲ್ವ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here