ಒಡಿಶಾ ರೈಲು ದುರಂತ – ರಕ್ಷಣಾ ಕಾರ್ಯಾಚರಣೆ ಅಂತ್ಯ

ಮಂಗಳೂರು: 288 ಜನರನ್ನು ಬಲಿ ಪಡೆದ ಒಡಿಶಾ ರೈಲು ದುರಂತ ಪ್ರಕರಣದ ರಕ್ಷಣಾ ಕಾರ್ಯಾಚರಣೆ ಅಂತ್ಯವಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನ ಹೇಳಿದ್ದಾರೆ. ಇದುವರೆಗೆ 1175 ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಈ ಪೈಕಿ 793 ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನುಳಿದಂತೆ 382 ರೋಗಿಗಳು ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಉಳಿದವರೆಲ್ಲರೂ ಸ್ಥಿರವಾಗಿದ್ದಾರೆ ಎಂದು ಒಡಿಶಾ ಆರೋಗ್ಯ ಇಲಾಖೆ ತಿಳಿಸಿದೆ. ಏಮ್ಸ್ ಭುವನೇಶ್ವರ್ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿನ ಶವಾಗಾರಕ್ಕೆ 160 ಶವಗಳನ್ನು ಸ್ಥಳಾಂತರಿಸಲಾಗಿದೆ.

LEAVE A REPLY

Please enter your comment!
Please enter your name here