ಚಾರ್ಮಾಡಿ ಘಾಟ್ ನಲ್ಲಿ ಬಸ್ ಸ್ಕೂಟರ್ ಅಪಘಾತ- ಇರ್ಫಾನ್ ಮೃತ್ಯು

ಮಂಗಳೂರು: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಮೂರನೇ ತಿರುವಿನಲ್ಲಿ ಬಸ್ಸು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜೂನ್ 5ರಂದು ನಡೆದಿದೆ.

ಚಾರ್ಮಾಡಿ ಘಾಟ್ ರಸ್ತೆಯ ಮೂಲಕವಾಗಿ ಚಿಕ್ಕಮಗಳೂರು ಕಡೆ ಹೋಗುತ್ತಿದ್ದ ಸರಕಾರಿ ಬಸ್ ಹಾಗೂ ಚಾರ್ಮಾಡಿ ಕಡೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಸ್ಕೂಟರ್ ನಲ್ಲಿದ್ದ ಬಾಳೆಹೊನ್ನೂರಿನ ಮಹಾಗುಂಡಿ ನಿವಾಸಿ ಇರ್ಫಾನ್ ಸ್ಥಳದಲ್ಲಿ ಸಾವನ್ನಪ್ಪಿದ್ದು, ಸಹ ಸವಾರ ಬಾಳೆಹೊನ್ನೂರು ನಿವಾಸಿ ಅವಿನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here