ರಾಜ್ಯದ ಹಲವೆಡೆ ಮಳೆ, ಸಿಡಿಲು ಬಡಿದು ಇಬ್ಬರೂ ರೈತರ ಸಾವು

ಮಂಗಳೂರು: ಬೆಂಗಳೂರು ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗಿದೆ.

ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿ ಗ್ರಾಮದ ಹೊರವಲಯದಲ್ಲಿ ಇಬ್ಬರು ರೈತರು ಶುಕ್ರವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.


ಗೊಲ್ಲರ ಹಟ್ಟಿಯ ಕಾಟಲಿಂಗಪ್ಪ(45) , ರಾಜಪ್ಪ (40) ಮೃತ ರೈತರು. ಹೊಲದಲ್ಲಿ ಬಿತ್ತನೆ ಗೆ ತೆರಳಿದ್ದ ಇವರು ಮಳೆಯ ಕಾರಣ ಮರದ ಕೆಳಗೆ ಆಶ್ರಯ ಪಡೆದಿದ್ದಾಗ ಸಿಡಿಲು ಬಡದು ಇಬ್ಬರೂ ಸ್ಥಳದಲ್ಲಿಯೇ ಅಸುನೀಗಿದ್ದಾರೆ.

ಇನ್ನೊಂದೆಡೆ ಅರಬಿ ಸಮುದ್ರದಲ್ಲಿ ಸೃಷ್ಟಿ ಆಗಿರುವ ಬಿ ಪರ್ ಜಾಯಿ ಚಂಡಮಾರುತವು ಮುಂದಿನ 36 ಗಂಟೆಗಳಲ್ಲಿ ತೀವ್ರ ಸ್ವರೂಪವನ್ನು ಪಡೆದುಕೊಳ್ಳಲಿದೆ ಮತ್ತು ಮುಂದಿನ ಎರಡು ದಿನಗಳಲ್ಲಿ ಉತ್ತರ ವಾಯುವ್ಯ ದಿಕ್ಕಿನಲ್ಲಿ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಶುಕ್ರವಾರ ಟ್ವೀಟ್ ನಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here