ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾದ ಯುವತಿ

ಮಂಗಳೂರು: ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿದ ಯುವತಿಯೊಬ್ಬಳು ಬಳಿಕ ಯಾವುದೇ ಸುದ್ದಿ ಇಲ್ಲದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿ ಲೆಕ್ಕಸಿರಿ ಪಾದೆ ನಿವಾಸಿ ರಮೇಶ್ ಸಾಲಿಯಾನ್ ಪುತ್ರಿ ನೇಹ (22) ಎಂದು ತಿಳಿದುಬಂದಿದೆ.

ಮಂಗಳೂರಿನ ಸಂಸ್ಥೆ ಒಂದರಲ್ಲಿ ಉದ್ಯೋಗದಲ್ಲಿದ್ದ ನೇಹಾಳಿಗೆ ಮನೆಯವರು ಮದುವೆ ಮಾಡಲು ಮುಂದಾದಾಗ ಸದ್ಯ ಮದುವೆ ಬೇಡ. ನಾನು ಹೆಚ್ಚಿನ ವಿದ್ಯಾಭ್ಯಾಸ ಮಾಡಬೇಕಾಗಿದೆ ಎಂದು ಹೇಳಿದ್ದ ನೇಹಾ ಎಂದಿನಂತೆ ಮೇ.27 ರಂದು ಮಂಗಳೂರಿಗೆ ಕೆಲಸಕ್ಕೆ ಎಂದು ಹೋಗಿದ್ದಳು. ಅದೇ ದಿನ ತನ್ನ ಚಿಕ್ಕಮ್ಮನಿಗೆ ನಾನು ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾಳೆ. ಮೇ 29 ಮತ್ತು ಜೂನ್ 6 ರಂದು ಬರೆದ ಎರಡು ಪತ್ರಗಳು ಮನೆಯವರಿಗೆ ತಲುಪಿದ್ದು ನಾನು ಬೆಂಗಳೂರಿನಲ್ಲಿ ಇರುವುದಾಗಿಯೂ ಹಾಗೂ ನನ್ನನ್ನು ಹುಡುಕಬೇಡಿ ಎಂದು ಪತ್ರದಲ್ಲಿ ತಿಳಿಸಲಾಗಿತ್ತು. ಆ ಬಳಿಕ ಮನೆಯವರೊಂದಿಗೆ ಸಂಪರ್ಕ ಕಡಿದುಕೊಂಡಿದ್ದಳು. ನೇಹಾ ನಾಪತ್ತೆಯಾಗಿರುವ ಬಗ್ಗೆ ಸಂಶಯವಿದ್ದು ಹುಡುಕಿ ಕೊಡುವಂತೆ ಸಹೋದರ ಅವಿನಾಶ್ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here