ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ – ಪೊಲೀಸ್ ಕಮಿಷನರ್ ಮಾಹಿತಿ

ಮಂಗಳೂರು : ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆಗೆ ಗ್ರಹ ಸಚಿವ ಪರಮೇಶ್ವರ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎಸಿಪಿ ಮತ್ತು ಸಿಸಿಬಿ ನೇತೃತ್ವದಲ್ಲಿ ವಿಂಗ್ ಸ್ಥಾಪನೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲ್ದೀಪ್ ಜೈನ್ ತಿಳಿಸಿದ್ದಾರೆ.

ವಿಂಗ್, ಕೋಮು ಪ್ರೇರಣೆ ವಿಚಾರಗಳ ಮೇಲೆ ನಿಗಾ ಇಡಲಿದ್ದು ಯಾವುದೇ ರೀತಿ ದ್ವೇಷ ಭಾಷಣ ಇತರ ಕೋಮು ಸೂಕ್ಷ್ಮ ವಿಚಾರದ ಬಗ್ಗೆ ಗಮನ ಹರಿಸಲಿದೆ. ಇನ್ನೂ ಕೋಮು ಸೂಕ್ಷ್ಮ ಕೊಲೆ, ದನ ಕಳವು, ನೈತಿಕ ಪೊಲೀಸ್ ಗಿರಿ ಮೇಲೆ ನಿಗಾ ವಹಿಸಲಾಗಿದ್ದು ಯಾವುದೇ ವಿಚಾರದ ಬಗ್ಗೆ ಎಸಿಪಿ, ಸಿಸಿಬಿ ಕಮಿಷನರಿಗೆ ಮಾಹಿತಿ ನೀಡಲಿದ್ದಾರೆ. ಕಳೆದ ಎರಡು ದಿನಗಳಿಂದ ಈ ವಿಂಗ್ ಕಾರ್ಯಾಚರಣೆ ಮಾಡುತ್ತಿದ್ದು ತಂಡಕ್ಕೆ ಐದರಿಂದ ಆರು ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here