ಮನೆ ಕಳ್ಳತನ ಪ್ರಕರಣದ ಆರೋಪಿಗಳ ಬಂಧನ – 1 ಕೆ.ಜಿ ಚಿನ್ನಾಭರಣ ವಶ

ಮಂಗಳೂರು: ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ 1 ಕೆ.ಜಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಕಾರ್ಕಳ ತಾಲೂಕಿನ ಮಾಳಾ ಮಲ್ಲಾರ್ ದರ್ಕಾಸುಮನೆ ನಿವಾಸಿ ಗಣೇಶ ನಾಯ್ಕ್(26) ಮತ್ತು ಕೊಡಗು ಜಿಲ್ಲೆಯ ಗುಯ್ಯಾ ಗ್ರಾಮ ನಿವಾಸಿ ರಂಜಿತ್ ಕೆ ಆರ್ (26) ಎಂದು ಗುರುತಿಸಲಾಗಿದೆ. ಜನವರಿ 15 ರಿಂದ 16ರ ಮಧ್ಯಾವಧಿಯಲ್ಲಿ ಮಂಗಳೂರು ತಾಲೂಕು ತಾಳಿಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯ ಬೀಗ ಮುರಿದು ಚಿನ್ನಾಭರಣ, ಬೆಳ್ಳಿ ಆಭರಣ ಹಾಗೂ ನಗದು ಕಳವು ಮಾಡಲಾಗಿತ್ತು ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು,

LEAVE A REPLY

Please enter your comment!
Please enter your name here