ಮತಾಂತರ ನಿಷೇಧ ಕಾಯ್ದೆ ರದ್ದುಮಾಡಲು ಮುಂದಾದ ಕಾಂಗ್ರೆಸ್-ಬಿಜೆಪಿ ರಾಜ್ಯಾಧ್ಯಕ್ಷರಿಂದ ಟೀಕೆ

ಮಂಗಳೂರು: ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ತೀರ್ಮಾನ ಮಾಡಿರುವ ಕಾಂಗ್ರೆಸ್ ಸರಕಾರ ಮತ್ತೆ ತನ್ನ ಹಿಂದೂ ವಿರೋಧಿ ನೀತಿಯನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ನಳಿನ್ ಅಲ್ಪಸಂಖ್ಯಾತರ ಓಲೈಕೆಗಾಗಿ ಸದಾ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕಾಂಗ್ರೆಸ್ ಬಲವಂತದ ಮತಾಂತರಗಳಿಗೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ದೂರಿದ್ದಾರೆ. ಹಿಂದೂಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಗೆ ಧಿಕ್ಕಾರವಿರಲಿ. ಹಿಂದೂಗಳು ಈಗ ಜಾಗೃತರಾಗಿದ್ದಾರೆ. ನಿಮ್ಮ ಓಲೈಕೆಯ ಆಟ ಇನ್ನು ನಡೆಯದು. ಹಿಂದೂಗಳನ್ನು ರದ್ಧಿ ಕಾಗದಂತೆ ಬಳಸುವ ನಿಮ್ಮ ದಾರ್ಷ್ಟ್ಯಕ್ಕೆ ಶೀಘ್ರವೇ ಉತ್ತರ ಸಿಗಲಿದೆ ಎಂದಿದ್ದಾರೆ.

 

LEAVE A REPLY

Please enter your comment!
Please enter your name here