ಕದ್ದ ಮಾಲಿನೊಂದಿಗೆ ನಾಲ್ವರು ಅಂತ‌ರ್ ರಾಜ್ಯ ಕಳ್ಳರ ಬಂಧನ

ಮಂಗಳೂರು: ಮಂಗಳೂರಿನ ಮನೆಯೊಂದರಲ್ಲಿ ಕಳ್ಳತನ ಮಾಡಿ ಕದ್ದ ಮಾಲಿನೊಂದಿಗೆ ದೆಹಲಿಗೆ ತೆರಳಲು ಸಜ್ಜಾಗಿದ್ದ ನಾಲ್ವರು ಅಂತರ್ ರಾಜ್ಯ ಕಳ್ಳರನ್ನು ಮಾಲು ಸಮೇತ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದೆಹಲಿಯ ಮೊಹಮ್ಮದ್ ಆಸಿಫ್ (23) ಶೇಕ್ ಮೈದುಲ್ (25) ವಕೀಲ್ ಅಹಮ್ಮದ್ (34) ಮತ್ತು ಪಶ್ಚಿಮ ಬಂಗಾಳದ ರಫೀಕ್ ಖಾನ್ (24) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ಬ್ರಿಜೇಶ್ ಅಪಾರ್ಟ್ಮೆಂಟ್ ನ ಎರಡು  ಫ್ಲಾಟ್ ಗಳಲ್ಲಿ ಜೂ.15ರ ಗುರುವಾರ ಕಳ್ಳತನದ ನಡೆದಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರಿಗೆ ದೂರು  ನೀಡಲಾಗಿತ್ತು.


ಪಣಂಬೂರ್ ಬೀಚ್ ಬಳಿ ನಾಲ್ವರು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬ್ರಿಜೇಶ್ ಅಪಾರ್ಟ್ಮೆಂಟ್ ನ ಎರಡು ಮನೆಗಳಲ್ಲಿ ಕಳವು ಮಾಡಿ ದೆಹಲಿಗೆ ಪರಾರಿಯಾಗಿಲು ಸಿದ್ಧತೆ ನಡೆಸಿದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಬಂಧಿತರು ಮಧ್ಯಾಹ್ನ 1:00 ರಿಂದ 3ರವರೆಗೆ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದ ಬೀಗ ಹಾಕಿರುವ ಮನೆಗಳು ಮತ್ತು ಅಪಾರ್ಟ್ಮೆಂಟ್ ಗಳನ್ನು ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡಿದ್ದರು.
ಬಂಧಿತರಿಂದ ಕಳ್ಳತನ ಮಾಡಿದ ಚಿನ್ನಾಭರಣ, ನಗದು ಮತ್ತು ಕೃತ್ಯಕ್ಕೆ ಬಳಸಲಾದ ಉಪಕರಣಗಳು ಸೇರಿದಂತೆ  7 ಮೊಬೈಲ್‌ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here