ಗೃಹಜೋತಿ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – ರಜಾ ದಿನವೂ ಅರ್ಜಿ ಸಲ್ಲಿಸಬಹುದು

ಮಂಗಳೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಅರ್ಜಿಗೆ ಇಂದಿನಿಂದ ಅವಕಾಶ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈಗಾಗಲೇ ಶಕ್ತಿ ಯೋಜನೆಯನ್ನು ಜಾರಿಗೊಳಿಸಿರುವ ಸರಕಾರ ಇದೀಗ ಎರಡನೇ ಅತಿಮುಖ್ಯ ಯೋಜನೆಗೆ ಚಾಲನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಎಸ್ಕಾಂ ಕಛೇರಿ ಮತ್ತು ನಾಡಕಚೇರಿಗಳು ಭಾನುವಾರ ರಜೆ ದಿನವಿದ್ದರೂ ಕಾರ್ಯ ನಿರ್ವಹಿಸಲು ಇಲಾಖೆ ಸೂಚನೆ ನೀಡಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ನೊಂದಣಿ ಮಾಡಿಕೊಳ್ಳಬೇಕು. ಇನ್ನು ಸೇವಾ ಸಿಂಧು ವೆಬ್ಸೈಟ್ ಬಳಸಿ ಮೊಬೈಲ್, ಕಂಪ್ಯೂಟರ್ ನಲ್ಲೂ ಅರ್ಜಿ ಸಲ್ಲಿಸಬಹುದು.

ಅಷ್ಟೇ ಅಲ್ಲದೆ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕಚೇರಿ, ಗ್ರಾಮ ಪಂಚಾಯತಿ ಕಚೇರಿ, ವಿದ್ಯುತ್ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇನ್ನು ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಆರ್ ಆರ್ ನಂಬರ್, ಮೊಬೈಲ್ ಸಂಖ್ಯೆ ಅವಶ್ಯಕತೆ ಇದೆ. ಬಾಡಿಗೆದಾರರಾಗಿದ್ದರೆ ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದು. ಸಮಸ್ಯೆ ಕಂಡು ಬಂದಲ್ಲಿ ಮಾಹಿತಿಗಾಗಿ 1912 ಸಹಾಯವಾಣಿಗೆ ಕಾಲ್ ಮಾಡಿ ಮಾಹಿತಿ ಪಡೆಯಬಹುದು.

LEAVE A REPLY

Please enter your comment!
Please enter your name here