ನೃತ್ಯ ಮಾಡಲು ಬಾರದವ ಅಂಗಳ ಡೊಂಕು ಅಂದಂತೆ ಕಾಂಗ್ರೆಸ್‌ ಸ್ಥಿತಿ‌ – ಕಟೀಲ್ ವ್ಯಂಗ್ಯ

ಮಂಗಳೂರು: ನೃತ್ಯ ಮಾಡಲು ಬಾರದವ ಅಂಗಳ ಡೊಂಕು ಎಂದನಂತೆ. ಈ ಗಾದೆಯಂತೆ ಕಾಂಗ್ರೆಸ್ ನ ಪರಿಸ್ಥಿತಿಯಾಗಿದೆ. ಕಾಂಗ್ರೆಸ್ ಬಿಟ್ಟಿ ಬಾಗ್ಯ ಘೋಷಿಸಿ ಅದನ್ನು ಕೊಡಲು ವ್ಯವಸ್ಥೆ ಆಗ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.‌

ಕೇಂದ್ರ ಸರಕಾರ ವೆಬ್ಸೈಟ್ ಹ್ಯಾಕ್ ಮಾಡಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಕೇಂದ್ರ ಸರ್ಕಾರ ಇಂತಹ ಕೆಲಸ ಮಾಡಲ್ಲ. ಇದು ಕಾಂಗ್ರೆಸ್ ನ ವಿಫಲತೆಯಾಗಿದೆ.  ಕೇಂದ್ರ ಅಥವಾ ಯಾವುದೇ ಸರಕಾರ ಯಾವುದೇ ಹ್ಯಾಕ್ ಮಾಡಲ್ಲ. ಇವರಿಗೆ ನೈತಿಕತೆ ಇಲ್ಲ. ನೈತಿಕತೆ ಇದ್ರೆ ಜನರಿಗೆ 10 ಕೆಜಿ ಅಕ್ಕಿ ಕೊಡಲಿ. ಕೇಂದ್ರ ಸರಕಾರ ಯಾವುದೇ ಅಕ್ಕಿ ಕಡಿತ ಮಾಡಿಲ್ಲ. ಇಲ್ಲಿ ನಮ್ಮ ಸರಕಾರ ಇಲ್ಲ. ಕೆಲವು ರಾಜ್ಯಗಳಲ್ಲಿ ನಮ್ಮ ಸರಕಾರ ಇದೆ. ಆದರೆ ಎಲ್ಲಿಯೂ ಕೇಂದ್ರ ಸರಕಾರ ಇಂತಹ ಕೆಲಸ ಮಾಡಿಲ್ಲ. ಸಿದ್ದರಾಮಯ್ಯ ಸುಮ್ಮನೆ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಟೀಲ್ ಕಿಡಿಕಾರಿದ್ದಾರೆ.

LEAVE A REPLY

Please enter your comment!
Please enter your name here