ಆಗಸ್ಟ್ 11 ಶಿವಮೊಗ್ಗದ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭ

ಮಂಗಳೂರು: ಆಗಸ್ಟ್ 11 ರಿಂದ ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಅಧಿಕೃತವಾಗಿ ವಿಮಾನ ಹಾರಾಟ ಆರಂಭಿಸಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ.

ಜಿಲ್ಲಾಡಳಿತ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶಿವಮೊಗ್ಗದ ವಿಮಾನ ನಿಲ್ದಾಣ ಈಗಾಗಲೇ ಉದ್ಘಾಟನೆಯಾಗಿದೆ. ಆಗಸ್ಟ್ 11ರಂದು ಅಧಿಕೃತವಾಗಿ ವಿಮಾನ ಹಾರಾಟ ಆರಂಭವಾಗಲಿದೆ. ಇದು ಅತ್ಯಂತ ಖುಷಿಯ ವಿಷಯವಾಗಿದೆ. ಈ ವಿಮಾನ ನಿಲ್ದಾಣಕ್ಕೆ ಈಗಾಗಲೇ ರಾಷ್ಟ್ರಕವಿ ಕುವೆಂಪುರವರ ಹೆಸರಿಡುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಾಗಿದೆ.

ಶಿವಮೊಗ್ಗ ರೈಲು ನಿಲ್ದಾಣಕ್ಕೆ ಕೆಳದಿ ಚೆನ್ನಮ್ಮ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು. ಹಾಗೆಯೇ ಡಿಸೆಂಬರ್ ಒಳಗೆ ಮಲೆನಾಡು ಭಾಗ ಸೇರಿದಂತೆ ನೆಟ್ವರ್ಕ್ ಸಮಸ್ಯೆ ನಿವಾರಣೆಯ ನಿಟ್ಟಿನಲ್ಲಿ ಸುಮಾರು 400 ಬಿಎಸ್ಎನ್ಎಲ್ ಟವರ್ ಗಳನ್ನು ನಿರ್ಮಿಸಲಾಗುವುದು ಎಂದರು.

LEAVE A REPLY

Please enter your comment!
Please enter your name here