ಇಂದು ಮಧ್ಯರಾತ್ರಿಯಿಂದ ಗೃಹಜ್ಯೋತಿ ಯೋಜನೆ ಆರಂಭ

ಮಂಗಳೂರು (ಬೆಂಗಳೂರು): ಕಾಂಗ್ರೆಸ್​​​ ಸರ್ಕಾರವು ಒಂದೊಂದೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಜುಲೈ 1 ರಂದು ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗ್ಯಾರಂಟಿಗಳು ಆರಂಭವಾಗಲಿದೆ.

200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆ ಅಡಿಯಲ್ಲಿ ಜುಲೈ 1ರ ರಾತ್ರಿ 12 ಗಂಟೆ ಬಳಸುವ 200 ಯುನಿಟ್‌ ಒಳಗಿನ ಸರಾಸರಿ ಕರೆಂಟ್‌ಗೆ ಬಿಲ್‌ ಕಟ್ಟುವಂತಿಲ್ಲ.

ಇನ್ನು12 ತಿಂಗಳ ಬಿಲ್ ನ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ಉಚಿತ ವಿದ್ಯುತ್​ ನೀಡಲಾಗುತ್ತದೆ. 12 ತಿಂಗಳ ಸರಾಸರಿ ಬಳಕೆ 200 ಯುನಿಟ್ ಇದ್ದರೂ ಫ್ರಿ ವಿದ್ಯುತ್​ ಸಿಗಲಿದೆ. 12 ತಿಂಗಳ ಸರಾಸರಿಗಿಂತ ಹೆಚ್ಚು ಬಳಸಿದ್ದಲ್ಲಿ ಮಾತ್ರ ಬಿಲ್ ಬರಲಿದೆ. 12 ತಿಂಗಳ ಸರಾಸರಿಯ ಬಿಲ್​ನಲ್ಲಿ 200 ಯುನಿಟ್ ಜೊತೆ 10 ಯುನಿಟ್ ಜಾಸ್ತಿಯಾದರೂ ಸಹ ಬಿಲ್ ಕಟ್ಟಬೇಕಾಗುತ್ತದೆ.

ಗೃಹಜ್ಯೋತಿಯ ಫಲಾನುಭವಿಗಳು ಒಟ್ಟು 2.14 ಕೋಟಿಯಷ್ಟು ಜನರಿದ್ದು, ಈ ಪೈಕಿ ಒಟ್ಟು 11 ದಿನಗಳಲ್ಲಿ ಒಟ್ಟು 80,99,932 ರಷ್ಟು ಜನರು ಅರ್ಜಿ ಹಾಕಿದ್ದಾರೆ.

LEAVE A REPLY

Please enter your comment!
Please enter your name here