ಜುಲೈ 13 ಅಥವಾ 14 – ಬೆಂಗಳೂರಿನಲ್ಲಿ ನಡೆಯಲಿದೆ ವಿಪಕ್ಷಗಳ ಸಭೆ – ಶರದ್‌ ಪವಾರ್

ಮಂಗಳೂರು(ಮುಂಬೈ): ವಿರೋಧ ಪಕ್ಷಗಳ ನಾಯಕರ ಮುಂದಿನ ಸಭೆ ಬೆಂಗಳೂರಿನಲ್ಲಿ ಜುಲೈ 13 ಅಥವಾ 14ರಂದು ನಡೆಯುವ ಸಾಧ್ಯತೆ ಇದೆ ಎಂದು ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಬಿಹಾರ ಮತ್ತು ಕರ್ನಾಟಕದಲ್ಲಿ ವಿಧಾನಸಭೆ ಅಧಿವೇಶನಗಳು ನಡೆಯುತ್ತಿರುವುದರಿಂದ ಇತರ ಪಕ್ಷಗಳೊಂದಿಗೆ ಸಮಾಲೋಚಿಸಿ ಈ ಎರಡು ದಿನಗಳಲ್ಲಿ ಒಂದು ದಿನವನ್ನು ನಿಗದಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಎನ್‌ಡಿಎ ಒಕ್ಕೂಟವನ್ನು ಹಣಿಯಲು ವಿಪಕ್ಷಗಳು ಕಸರತ್ತು ನಡೆಸುತ್ತಿವೆ. ಹಲವು ಸಭೆಗಳನ್ನು ನಡೆಸುತ್ತಿವೆ. ಇತ್ತೀಚೆಗೆ ಬಿಹಾರದ ಪಾಟ್ನಾದಲ್ಲಿ ಸಭೆ ನಡೆದಿತ್ತು. ಈಗ ಎರಡನೇ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಮೊದಲು ಶೀಮ್ಲಾದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರುವ ಬೆಂಗಳೂರಿನಲ್ಲಿ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ.

 

LEAVE A REPLY

Please enter your comment!
Please enter your name here