ಮಹಾರಾಷ್ಟ್ರ ಎಕ್ಸ್‌ಪ್ರೆಸ್‌ ವೇ ನಲ್ಲಿ ಬಸ್ಸಿಗೆ ಬೆಂಕಿ – 25 ಮಂದಿ ಸಜೀವ ದಹನ

ಮಂಗಳೂರು (ಬುಲ್ಧಾನಾ ಮಹಾರಾಷ್ಟ್ರ): ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ ವೇ ನಲ್ಲಿ ಜು.1ರ ನಸುಕಿನ 2 ಗಂಟೆ ಸಮಯಕ್ಕೆ ಬಸ್ಸಿಗೆ ಬೆಂಕಿ ಹತ್ತಿಕೊಂಡು ಸಂಭವಿಸಿದ ಭೀಕರ ದುರಂತದಲ್ಲಿ 25 ಮಂದಿ ಸುಟ್ಟು ಕರಕಲಾಗಿದ್ದಾರೆ.

“ಬಸ್ಸಿನಿಂದ 25 ಶವಗಳನ್ನು ಹೊರತೆಗೆಯಲಾಗಿದೆ. ಬಸ್ಸಿನಲ್ಲಿ ಒಟ್ಟು 32 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. 6-8 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ದಾನ ಸಿವಿಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಡಿ ವೈ ಎಸ್‌ ಪಿ ಬಾಬು ರಾವ್‌ ಮಹಾಮುನಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here