ದೂದ್‌ ಗಂಗಾ ನದಿ ತಟದಲ್ಲಿ 4 ತಲೆ ಬುರುಡೆ ಪತ್ತೆ

ಮಂಗಳೂರು(ಬೆಳಗಾವಿ): ಬೆಳಗಾವಿ ಜಿಲ್ಲೆಯ ಪಕ್ಕದಲ್ಲಿರುವ ಕೊಲ್ಹಾಪುರದ ದೂದ್‌ ಗಂಗಾ ನದಿಯ ಪಕ್ಕದಲ್ಲಿ ನಾಲ್ಕು ಮಾನವ ತಲೆಬುರುಡೆ ಪತ್ತೆಯಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕಾಗಲ್ ನಲ್ಲಿ ಈ ಘಟನೆ ನಡೆದಿದೆ.

ಜಾನುವಾರುಗಳ ಮೈ ತೊಳೆಯಲು ಹೋದ ರೈತರ ಕಣ್ಣಿಗೆ ಈ ತಲೆ ಬುರುಡೆಗಳು ಕಾಣಿಸಿದ್ದು, ಬೆಚ್ಚಿಬಿದ್ದ ರೈತರು, ಸ್ಥಳೀಯರು ಕಾಗಲ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಹಾರಾಷ್ಟ್ರದ ಕಾಗಲ್ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ನದಿ ಪಾತ್ರದಲ್ಲಿದ್ದ ಮಾನವ ತಲೆ ಬುರುಡೆಗಳನ್ನು ವಶಪಡಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ. ವಿಧಿವಿಜ್ಞಾನ ಪರೀಕ್ಷೆಯ ಬಳಿಕವಷ್ಟೇ ಸತ್ಯ ಸಂಗತಿ ಬೆಳಕಿಗೆ ಬರಲಿದೆ.

LEAVE A REPLY

Please enter your comment!
Please enter your name here