ರಾಜ್ಯಾಧ್ಯಕ್ಷರು ನೀಡಿದ ನೋಟಿಸ್‌ ಗೆ ಹೆದರುವವನಲ್ಲ – ರೇಣುಕಾಚಾರ್ಯ

ಮಂಗಳೂರು: ನೋಟಿಸ್ ಗೆ ಹೆದರಿ ಬಿಡುತ್ತೇನೆ ಎಂದು ಭಾವಿಸಿದ್ದರೆ ತಪ್ಪು. ಇಂತಹ ನೋಟೀಸ್ ಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ 11 ಮಂದಿಗೆ ನೋಟಿಸ್ ನೀಡಿದ್ದೇವೆ ಎಂದು ಹೇಳಿದ್ದಾರೆ.

ಆದರೆ ಉಳಿದ ಹತ್ತು ಮಂದಿ ಯಾರು ಎಂದು ಮಾಜಿ ಸಚಿವ ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರೇಣುಕಾಚಾರ್ಯ ಬಿಎಸ್ ವೈ ಅವರನ್ನು ಷಡ್ಯಂತರ ಮಾಡಿ ಎರಡು ಬಾರಿ ಅಧಿಕಾರದಿಂದ ಇಳಿಸಿದರು. ಅವರ ಪಾದಯಾತ್ರೆ ಪ್ರತಿಫಲವಾಗಿ ಬಿಜೆಪಿ‌ ಈ ಮಟ್ಟಕ್ಕೆ ಬೆಳೆದಿದೆ. ಅವರು ಬಿಜೆಪಿಯ ಅಗ್ರಮಾನ್ಯ ನಾಯಕ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here