ಶರಣಾಗತಿಗೆ ನೀಡಿದ ಗಡುವು ಅಂತ್ಯ-ಶರಣಾಗದ ನೆಟ್ಟಾರು ಹತ್ಯೆ ಆರೋಪಿಗಳು

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾಗತಿಗೆ ಎನ್‌ ಐ ಎ ವಿಶೇಷ ನ್ಯಾಯಾಲಯ ಸೂಚಿಸಿದ ಗಡುವು ಜೂನ್ 30ಕ್ಕೆ ಮುಕ್ತಾಯಗೊಂಡಿದೆ.

ಜೂನ್ 30 ರೊಳಗೆ ತಲೆಮರೆಸಿಕೊಂಡಿರುವ ಆರೋಪಿಗಳು ಶರಣಾಗಬೇಕು ಇಲ್ಲವೇ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಸೂಚನೆ ನೀಡಲಾಗಿತ್ತು. ಅದರೊಂದಿಗೆ ಧ್ವನಿವರ್ಧಕದ ಮೂಲಕ ಸಂದೇಶ ಬಿತ್ತರಿಸಲಾಗಿತ್ತು. ಆರೋಪಿಗಳ ಮನೆಗಳಲ್ಲೂ ಬಿತ್ತಿ ಪತ್ರ ಹಚ್ಚುವ ಮೂಲಕ ಮಾಹಿತಿ ನೀಡಲಾಗಿತ್ತು. ಆದರೆ ಆರೋಪಿಗಳು ಶರಣಾಗಿಲ್ಲ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here