ಬೀದಿ ನಾಯಿಗಳ ರಕ್ಷಕಿ ರಜನಿ ಶೆಟ್ಟಿ ಮೇಲೆ ಹಲ್ಲೆ- ದೂರು ದಾಖಲು

ಮಂಗಳೂರು: ಬೀದಿ ನಾಯಿಗಳ ರಕ್ಷಕಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ಮಹಿಳೆಯೊಬ್ಬರು ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಮಂಜುಳಾ ವಿರುದ್ಧ ರಜನಿ ಶೆಟ್ಟಿ ದೂರು ದಾಖಲಿಸಿದ್ದಾರೆ.

ಈ ಕುರಿತು ಮಾತನಾಡಿರುವ ರಜನಿ, ನಾನು ಬಾಡಿಗೆ ಮನೆಯಲ್ಲಿ ನಾಯಿಗಳನ್ನು ಸಾಕುತ್ತಿದ್ದು ಆದರೆ ಮಂಜುಳಾ ಸ್ಥಳದಿಂದ ಜಾಗ ಕಾಲಿ ಮಾಡಬೇಕೆಂದು ಹೇಳುತ್ತಿದ್ದಾರೆ. ನಾನು ಕಳೆದ 22 ವರ್ಷಗಳಿಂದ ಬೀದಿನಾಯಿಗಳ ಆರೈಕೆ ಮಾಡುತ್ತಿದ್ದೇನೆ. ನಾಯಿಗಳಿಂದಾಗಿ ಯಾರಿಗೂ ಯಾವುದೇ ಆರೋಗ್ಯ ಸಮಸ್ಯೆಗಳು ಎದುರಾಗಿಲ್ಲ. ಆದರೆ ಮಂಜುಳಾ ನನ್ನೊಂದಿಗೆ ಪ್ರತಿದಿನ ಜಗಳವಾಡುತ್ತಾರೆ. ಮಂಜುಳಾ ವಿರುದ್ಧ ದೂರು ದಾಖಲಿಸುತ್ತೇನೆ ಎಂದು ಹೇಳಿದ್ದಾರೆ. ಹಲ್ಲೆ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಾಣಿ ಪ್ರೇಮಿ ಆಗಿರುವ ರಜನಿ ಶೆಟ್ಟಿ ಅವರು ಪ್ರಾಣಿಗಳನ್ನು ರಕ್ಷಿಸಿದ್ದಕ್ಕಾಗಿ ವ್ಯಾಪಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ಪ್ರತಿ ದಿನ 400 ರಿಂದ 500 ಬೀದಿ ನಾಯಿಗಳಿಗೆ ಆಹಾರವನ್ನು ನೀಡುತ್ತಿದ್ದು, ಜೊತೆಗೆ ತನ್ನ ಮನೆಯಲ್ಲಿ ಹಲವಾರು ನಾಯಿ, ಬೆಕ್ಕು ಮತ್ತು ಪಕ್ಷಿಗಳನ್ನು ಸಾಕುತ್ತಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here