ಜೈನ ಮುನಿ ಹತ್ಯೆ ಪ್ರಕರಣ – ಮೃತ ದೇಹ ಪತ್ತೆ ಹಚ್ಚಿದ ಪೊಲೀಸರು

ಮಂಗಳೂರು (ಬೆಳಗಾವಿ): ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿ ಅವರ ಮೃತ ದೇಹವು ಶನಿವಾರ ಪತ್ತೆಯಾಗಿದೆ.
ಸ್ವಾಮೀಜಿ ನಾಪತ್ತೆಯಾಗಿದ್ದ ಆಶ್ರಮದಿಂದ 28 ಕಿಲೋಮೀಟರ್ ದೂರದಲ್ಲಿರುವ ರಾಯಭಾಗ ತಾಲೂಕಿನ ಆರೋಪಿಯ ಹೊಲದಲ್ಲಿನ ಕೊಳವೆ ಬಾವಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಆರೋಪಿಗಳು ಶವವನ್ನು ತುಂಡು ತುಂಡಾಗಿ ಕತ್ತರಿಸಿ ಬಟ್ಟೆಯಲ್ಲಿ ಸುತ್ತಿ ಚೀಲದೊಳಗೆ ಇಟ್ಟು ಕೊಳವೆ ಬಾವಿಯಲ್ಲಿ ಹಾಕಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ಆರೋಪಿಗಳ ಮಾಹಿತಿ ಆಧರಿಸಿ ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಪೊಲೀಸರು ಶವದ ಭಾಗಗಳನ್ನು ಹೊರತೆಗೆದಿದ್ದಾರೆ.

 

LEAVE A REPLY

Please enter your comment!
Please enter your name here