ಕೆಲಸದಾಳುವಿನ ಕೊಲೆ – ಸಾಕ್ಷಿ ನಾಶಕ್ಕೆ ಯತ್ನ – ಆರೋಪಿ ಬಂಧನ

ಮಂಗಳೂರು: ಮಂಗಳೂರು ನಗರದ ಹೊರವಲಯದಲ್ಲಿರುವ ಮುಳಿಹಿತ್ಲು ನ ಅಂಗಡಿಯೊಂದರಲ್ಲಿ ಕೆಲಸಕ್ಕೆ ದ ಯುವಕನನ್ನು ಅಂಗಡಿ ಮಾಲಕ ಹತ್ಯೆಗೈದು ಸಾಕ್ಷಿ ನಾಶಕ್ಕೆ ಯತ್ನಿಸಿ ಪೊಲೀಸರಿಂದ ಬಂಧನಕ್ಕೆ ಒಳಗಾದ ಘಟನೆ ಜು.8ರಂದು ನಡೆದಿದೆ.

ಮುಳಿಹಿತ್ಲು ಜಂಕ್ಷನ್ ನಲ್ಲಿರುವ ಜನರಲ್ ಸ್ಟೋರ್ ಒಂದರಲ್ಲಿ ಕೆಲಸಕ್ಕಿದ್ದ ಜಗ್ಗು (35) ನಿಗೂಢವಾಗಿ ಸಾವನ್ನಪ್ಪಿದ ಯುವಕ. ಈತ ಮಂಗಳೂರಿನ ಪಾಂಡೇಶ್ವರ ನಿವಾಸಿ ತೌಸೀಫ್ ಹಸನ್ ಬಳಿ ಕೆಲಸ ಮಾಡುತ್ತಿದ್ದ. ಜು.8ರಂದು ಬೆಳಿಗ್ಗೆ ಆರೋಪಿ ಹಸನ್ ಹಾಗೂ ಕೆಲಸದಾಳು ಜಗ್ಗು ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಈ ವೇಳೆ ಆರೋಪಿಯು ಜಗ್ಗುಗೆ ಬೆಂಕಿ ಕೊಟ್ಟು ಕೊಲೆ ಮಾಡಿದ್ದಾನೆ ಮತ್ತು ಆಸುಪಾಸಿನ ಜನರಲ್ಲಿ ವಿದ್ಯುತ್ ಶಾಕ್ ಹೊಡೆದಿರುವುದಾಗಿ ನಂಬಿಸಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಆರೋಪಿ ಜಗ್ಗುವನ್ನು ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಜಗ್ಗು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು ಮೇಲ್ನೋಟಕ್ಕೆ ಕೊಲೆ ಪ್ರಕರಣವೆಂದು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿ ತೌಸಿಫ್ ಹಸನ್ ನನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here