ಮೂಡಿಗೆರೆಯಲ್ಲಿ ಬಂಟ್ವಾಳದ ಸವಾದ್ ಹತ್ಯೆ ಪ್ರಕರಣ – ಮತ್ತೆ ನಾಲ್ವರು ಆರೋಪಿಗಳ ಬಂಧನ

ಮಂಗಳೂರು : ಬಂಟ್ವಾಳದ ಸವಾದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ದಾವುದ್ ಅಮೀರ್, ಅಬ್ದುಲ್ ರಹೀಜ್, ಕಾವಳ ಮುಡೂರು ಗ್ರಾಮದ ಆಫ್ರಿದಿ, ಮಹಮ್ಮದ್ ಇರ್ಶಾದ್ ಎಂದು ಗುರುತಿಸಲಾಗಿದೆ.
ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಜೈನುಲ್ಲಾ ಎಂಬವರನ್ನು ಬಂಧಿಸಲಾಗಿದ್ದು, ತಲೆಮರಿಸಿಕೊಂಡಿದ್ದ ನಾಲ್ವರನ್ನು ಜು.9ರಂದು ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದಂತಾಗಿದೆ.
ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್ಐ ಜುಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧಡೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here