ಬೋಗಿಯಲ್ಲಿ ಹೊಗೆ – ಚೈನ್ ಎಳೆದು ರೈಲು ನಿಲ್ಲಿಸಿದ ಪ್ರಯಾಣಿಕರು

ಮಂಗಳೂರು (ಒಡಿಶಾ): ಒಡಿಶಾದ ಗಂಜಾಂ ಜಿಲ್ಲೆಯ ಮೂಲಕ ತೆರಳುತ್ತಿದ್ದ ದಿಬ್ರುಗಢ – ಕನ್ಯಾಕುಮಾರಿ ವಿವೇಕ್ ಎಕ್ಸ್ಪ್ರೆಸ್ ರೈಲಿನ ಕೋಚ್ ವೊಂದರ ಕೆಳಗಡೆ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಭಯಭೀತರಾದ
ಪ್ರಯಾಣಿಕರು ಬ್ರಹ್ಮಪುರ ರೈಲು ನಿಲ್ದಾಣದ ಬಳಿ ಚೈನ್ ಎಳೆದು ರೈಲನ್ನು ನಿಲ್ಲಿಸಿರುವ ಘಟನೆ ನಡೆದಿದೆ.

ರೈಲು ನಿಲ್ಲುತ್ತಿದ್ದಂತೆ ಪ್ರಯಾಣಿಕರು ದಾವಂತದಿಂದ ಕೆಳಗೆ ಇಳಿದಿದ್ದಾರೆ. ಕೂಡಲೇ ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೋಗಿಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಕೋಚಿನ ಬ್ರೇಕ್ – ಬೈಂಡಿಂಗ್ ಭಾಗದಲ್ಲಿ ಗೋಣಿಚೀಲ ಸಿಲುಕಿಕೊಂಡಿದ್ದು ಕಂಡು ಬಂದಿದೆ. ಚಕ್ರದಿಂದ ಗೋಣಿಚೀಲವನ್ನು ತೆಗೆದುಹಾಕಲಾಗಿದೆ. ಬೆಂಕಿ ನಿರೋಧಕ ಬಳಸಲಾಗಿದ್ದು ರೈಲಿಗೆ ಯಾವುದೇ ಹಾನಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here