ಬೆಲೆ ಏರಿಕೆ ಬಿಸಿ – ಟೊಮೆಟೊ ಗಾಗಿ ಚಾಕು ಇರಿತ

ಮಂಗಳೂರು (ರಾಯಚೂರು): ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮಾರ್ಕೆಟ್ ನಲ್ಲಿ ಟೊಮೆಟೊ ಗಾಗಿ ಚಾಕು ಇರಿದ ಘಟನೆ ನಡೆದಿದೆ.

ಮಾನ್ವಿ ಪುರಸಭೆ ಮಳಿಗೆಯ ತರಕಾರಿ ಮಾರ್ಕೆಟ್ ನಲ್ಲಿ ರಫಿ ಎಂಬಾತ ಯಾರಾದರೂ ಟೊಮೆಟೊ ಕದಿಯಬಹುದು ಎಂಬ ಭಯದಿಂದ ತನ್ನ ತಳ್ಳುವ ತರಕಾರಿ ಗಾಡಿಯಲ್ಲಿ ಮಲಗಿದ್ದ. ಈ ವೇಳೆ ರಫಿ ಜೊತೆ ಮಾತನಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬಂದಿದ್ದಾನೆ. ಬಂದವನೇ ರಫಿ ಕುತ್ತಿಗೆ ಭಾಗಕ್ಕೆ ಚಾಕು ಇರಿದು ಪರಾರಿಯಾಗಿದ್ದಾನೆ.

ಆರೋಪಿಯ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮಾನ್ವಿ ತಾಲೂಕು ಆಸ್ಪತ್ರೆಯಲ್ಲಿ ರಫಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಂದೆಡೆ ಟೊಮೆಟೊ ಕಳ್ಳತನಕ್ಕೆ ಯತ್ನಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದರೆ ಇನ್ನೊಂದೆಡೆ ಮೊಬೈಲ್‌ ಕಳ್ಳತನ ಮಾಡಲು ಯತ್ನಿಸಿರುವ ಬಗ್ಗೆಯು ಶಂಕೆ ವ್ಯಕ್ತವಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here