ಇಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ – ಸೋನಿಯಾ, ಮಮತಾ ಸೇರಿದಂತೆ ಹಲವರು ಭಾಗಿ ಸಾಧ್ಯತೆ

ಮಂಗಳೂರು (ಬೆಂಗಳೂರು): ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲು ಮುಂದಾಗಿರುವ ವಿರೋಧ ಪಕ್ಷಗಳು ಉದ್ಯಾನನಗರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಮಹತ್ವದ ಸಭೆ ನಡೆಸಲಿದೆ. ಕಾಂಗ್ರೆಸ್, ಟಿಎಂಸಿ, ಸಮಾಜವಾದಿ ಪಕ್ಷ, ಆರ್ ಜೆ ಡಿ, ಡಿಎಂಕೆ, ಸಿಪಿಐ, ಅಪ್ ಸೇರಿದಂತೆ 23 ಪಕ್ಷಗಳಿಗೆ ಈ ಸಭೆಗೆ ಆಹ್ವಾನ ನೀಡಲಾಗಿದೆ.


ರಾಷ್ಟ್ರಮಟ್ಟದಲ್ಲಿ ವಿರೋಧಪಕ್ಷಗಳ ಎರಡನೇ ಸಭೆ ಬೆಂಗಳೂರಿನಲ್ಲಿ ನಡೆಯುತ್ತಿದ್ದರೂ ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡಲಾಗಿಲ್ಲ ಎಂದು ತಿಳಿದು ಬಂದಿದೆ. ಒಂದೆರಡು ದಿನದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ಸೇರಿದಂತೆ ಇನ್ನಿತರ ಮುಖಂಡರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here