ಕಾಸರಗೋಡು ಜಿಲ್ಲಾ ನೋಂದಾಣಿಧಿಕಾರಿ ಮುಹಮ್ಮದ್ ಅಶ್ರಫ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಮಂಗಳೂರು(ಕಾಸರಗೋಡು): ಜಿಲ್ಲಾ ನೋಂದಾಣಿಧಿಕಾರಿ ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಮೂಲತಃ ಮಲಪ್ಪುರಂ ನಿವಾಸಿ ಟಿ. ಇ ಮುಹಮ್ಮದ್ ಅಶ್ರಫ್ (55) ಎಂದು ಗುರುತಿಸಲಾಗಿದೆ. ಕಾಸರಗೋಡು ಜಿಲ್ಲಾ ನೋಂದಣಿ ಅಧಿಕಾರಿಯಾಗಿದ್ದ ಇವರು ನಗರದ ಹೊರವಲಯದ ಹೊಟೇಲೊಂದರಲ್ಲಿ ಜುಲೈ19 ರಂದು ರೂಂ ಪಡೆದು ವಾಸ್ತವ್ಯ ಹೂಡಿದ್ದರು ಎನ್ನಲಾಗಿದೆ.

ಬೆಳಿಗ್ಗೆ ಅಶ್ರಫ್ ರವರು ರೂಂ ನಿಂದ ಹೊರಬಾರದೆ, ಮೊಬೈಲ್ ಕರೆಯನ್ನೂ ಸ್ವೀಕರಿಸದೆ ಇದ್ದುದರಿಂದ ಸಂಶಯಗೊಂಡು ಬಾಗಿಲು ತೆರೆದು ನೋಡಿದಾಗ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಸ್ಪತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ಧೃಡೀಕರಿಸಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here