ಆ. 5ರಂದು ಗೃಹ ಜ್ಯೋತಿ ,ಆ.17ರಂದು ಗೃಹಲಕ್ಷ್ಮಿ ಯೋಜನೆಗೆ ಸಿಎಂ ಅಧಿಕೃತ ಚಾಲನೆ

ಬೆಂಗಳೂರು: ರಾಜ್ಯದ ಜನರ ಬಹು ನಿರೀಕ್ಷೆಯ ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್ 5ರಂದು ಗೃಹ ಜ್ಯೋತಿ ಹಾಗೂ ಆಗಸ್ಟ್ 17ರಂದು ಗೃಹಲಕ್ಷ್ಮಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಜುಲೈ.18ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡ ಗೃಹ ಜ್ಯೋತಿ ಹಾಗೂ ಜು.21ರಿಂದ ನೋಂದಣಿ ಆರಂಭಗೊಂಡಂತ ಗೃಹ ಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಸ್ಟ್ 5 ಹಾಗೂ 17ರಂದು ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಆಗಸ್ಟ್ 5ರಂದು ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಯೋಜನೆ ಫಲಾನುಭವಿಗಳಿಗೆ ಒದಗಿಸಿ ಕೊಡುವ ಸೌಲಭ್ಯಕ್ಕೆ ಬೆಳಗಾವಿಯಲ್ಲಿ ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಲಿದ್ದಾರೆ. ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 17ರಂದು ಬೆಳಗಾವಿಯಲ್ಲಿ ಸಿಎಂ ಸಿದ್ಧರಾಮಯ್ಯ ಉದ್ಘಾಟಿಸಲಿದ್ದಾರೆ. ಆ ಬಳಿಕ ಯಜಮಾನಿ ಮಹಿಳೆಯರ ಖಾತೆಗೆ 2000 ಜಮಾ ಆಗಲಿದೆ.

LEAVE A REPLY

Please enter your comment!
Please enter your name here