1969ರ ಜನನ-ಮರಣ ಕಾಯ್ದೆಗೆ ತಿದ್ದುಪಡಿ – ಮಸೂದೆ ಮಂಡನೆ

ಮಂಗಳೂರು: 1969ರ ಜನನ ಮತ್ತು ಮರಣಗಳ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶದ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಜು.26ರಂದು ಮಂಡಿಸಿದೆ. ಈ ಕಾಯ್ದೆ ಜಾರಿಗೆ ಬಂದು 54 ವರ್ಷಗಳ ನಂತರ ಮೊದಲ ಬಾರಿಗೆ ತಿದ್ದುಪಡಿ ಮಾಡುತ್ತಿರುವುದು ಗಮನಾರ್ಹವಾಗಿದೆ.

ಈ ತಿದ್ದುಪಡಿ ಮೂಲಕ ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹಾಗೂ ಸರ್ಕಾರಿ ನೌಕರಿಗೆ ನಡೆಯುವ ನೇಮಕಾತಿ ಸಂದರ್ಭಗಳಲ್ಲಿ ಜನನ ಪ್ರಮಾಣ ಪತ್ರವನ್ನು ಒಂದೇ ದಾಖಲೆ ಬಳಸಲು ಅವಕಾಶ ನೀಡಲಾಗುತ್ತದೆ.ಅಷ್ಟೇ ಅಲ್ಲದೇ ಮತದಾರರ ಪಟ್ಟಿ ಸಿದ್ಧಪಡಿಸಲು, ಆಧಾರ್ ಸಂಖ್ಯೆ, ನೀಡುವಾಗ ಹಾಗೂ ವಿವಾಹ ನೋಂದಣಿ ಸಂದರ್ಭದಲ್ಲಿಯೂ ಜನನ ಪ್ರಮಾಣಪತ್ರವನ್ನು ಬಳಸುವುದನ್ನು ಈ ಉದ್ದೇಶಿತ ತಿದ್ದುಪಡಿ ಒಳಗೊಂಡಿದೆ.

ಈ ಹಿಂದೆ ಜನನ ಪ್ರಮಾಣಪತ್ರ ಬಳಸಬೇಕು ಎಂಬ ಸರ್ಕಾರದ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಖಾಸಗಿತನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಲವರು ಈ ನಡೆಯು ರಾಜ್ಯಗಳ ಹಕ್ಕುಗಳನ್ನು ಕಸಿಯಲಿದೆ ಎಂದು ದೂರಿದ್ದರು. ಜನರಿಗೆ ಸಂಬಂಧಿಸಿದ ಮಾಹಿತಿಯನ್ನು ಸರ್ಕಾರವು ಅನಿಯಂತ್ರಿತವಾಗಿ ಪಡೆಯುವುದು ಸಾಧ್ಯವಾಗಲಿದೆ ಎಂಬ ಆತಂಕವನ್ನು ಹೊರಹಾಕಿದ್ದರು.ಈ ಬಗ್ಗೆ ಮಾತನಾಡಿದ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್, ”ಸಾಮಾಜಿಕ ಬದಲಾವಣೆ ಮತ್ತು ತಂತ್ರಜ್ಞಾನದಲ್ಲಿನ ಪ್ರಗತಿಗೆ ತಕ್ಕಂತೆ ಈ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ’ ಎಂದು ಹೇಳಿದ್ದಾರೆ.”ತಿದ್ದುಪಡಿ ಮೂಲಕ ಕಾಯ್ಕೆಯನ್ನು ಮತ್ತಷ್ಟು ನಾಗರಿಕಸ್ನೇಹಿಯಾಗಿಸುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಗಳು, ಸಾರ್ವಜನಿಕರು ಹಾಗೂ ಇತರ ಭಾಗೀದಾರರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಲಾಗಿದೆ” ಎಂದು ಅವರು ತಿಳಿಸಿದರು.

ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಮನೀಷ್ ತಿವಾರಿ, ”ಈ ಮಸೂದೆಯು ವ್ಯಕ್ತಿಯ ಖಾಸಗಿತನ ಹಕ್ಕು ಕೇಂದ್ರ ಮತ್ತು ರಾಜ್ಯಗಳ ನಡುವೆ ಅಧಿಕಾರ ವಿಂಗಡಣೆಯ ಉಲ್ಲಂಘನೆಯಾಗಲಿದೆ” ಎಂದು ಹೇಳಿದರು.

ಪ್ರಮುಖ ಅಂಶಗಳು:
* ಜನನ ಪ್ರಮಾಣಪತ್ರವನ್ನು ಜನಿಸಿದ ದಿನಾಂಕ ಮತ್ತು ಸ್ಥಳದ ಪುರಾವೆಯ ದಾಖಲೆಯಂತೆ ಬಳಸಬಹುದು.
* ಜನಸಂಖ್ಯಾ, ರಿಜಿಸ್ಟರ್, ಮತದಾರರ ಪಟ್ಟಿ, ಆಧಾರ್ ಸಂಖ್ಯೆ, ಪಡಿತರ ಚೀಟಿ, ಪಾಸ್‌ಪೋರ್ಟ್, ಆಸ್ತಿ ನೋಂದಣಿ ಹಾಗೂ ಕೇಂದ್ರ ಸರ್ಕಾರದಿಂದ ಅಧಿಸೂಚಿತ ಇತರ ಡೇಟಾಬೇಸ್‌ಗಳನ್ನು ನಿರ್ವಹಿಸುವ ಪ್ರಾಧಿಕಾರಗಳಿಗೆ ಜನನ ಮತ್ತು ಮರಣಗಳ ಡೇಟಾಬೇಸ್ ಒದಗಿಸುವುದು.
* ದತ್ತು ಪಡೆದ ಮಗು, ಅನಾಥ, ಪರಿತ್ಯಕ್ತ, ಬಾಡಿಗೆ ತಾಯ್ತನದಿಂದ ಪಡೆದ ಮಗು, ಒಬ್ಬರೇ ಪಾಲಕರಿರುವ ಅಥವಾ ಅವಿವಾಹಿತ ತಾಯಿಯ ಮಗುವಿನ ನೋಂದಣಿಗೆ ತಿದ್ದುಪಡಿ ನೆರವಾಗಲಿದೆ.
*ವಿಪತ್ತು ಅಥವಾ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡ ಸಂದರ್ಭದಲ್ಲಿ ಮರಣಗಳ ನೋಂದಣಿ ಹಾಗೂ ಮರಣ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆಗೆ ವೇಗ ನೀಡುವುದಕ್ಕಾಗಿ ವಿಶೇಷ ಸಬ್‌ರಿಜಿ‌ಗಳ ನೇಮಕಕ್ಕೆ ಅವಕಾಶ.
* ಜನನ ನೋಂದಣಿ ಸಂದರ್ಭದಲ್ಲಿ ಪಾಲಕರ ಅಥವಾ ಮಾಹಿತಿ ನೀಡುವವರ ಆಧಾ‌ ಸಂಖ್ಯೆಯನ್ನು ಸಂಗ್ರಹಿಸಲು ಅವಕಾಶ.
* ರಿಜಿಸ್ಕಾ‌ ಅಥವಾ ಜಿಲ್ಲಾ ರಿಜಿಸ್ಟ್ರಾ‌ಗಳು ತೆಗೆದುಕೊಂಡ ಕ್ರಮ ಇಲ್ಲವೇ ಹೊರಡಿಸಿದ ಆದೇಶದಿಂದ ತೊಂದರೆಗೆ ಒಳಗಾಗುವ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಲು ಮತ್ತು ದಂಡದ ಮೊತ್ತವನ್ನು ಹೆಚ್ಚಿಸಲು ಅವಕಾಶ ಕಲ್ಪಿಸುತ್ತದೆ.

LEAVE A REPLY

Please enter your comment!
Please enter your name here