ಪರಿಸ್ಥಿತಿ ಅವಲೋಕಿಸಲು ಇಂದು ಮಣಿಪುರಕ್ಕೆ ಭೇಟಿ ನೀಡಲಿರುವ ‘ಇಂಡಿಯಾ’ ನಿಯೋಗ

ಮಂಗಳೂರು(ನವದೆಹಲಿ): ಮಣಿಪುರದಲ್ಲಿನ ಸದ್ಯದ ಪರಿಸ್ಥಿತಿಯನ್ನು ‘ಇಂಡಿಯಾ’ ಮೈತ್ರಿಕೂಟದ ನಿಯೋಗ ಜು.29 ರಂದು ಅವಲೋಕನ ನಡೆಸಲಿದೆ.

‘ಇಂಡಿಯಾ’ ಮೈತ್ರಿಕೂಟದಲ್ಲಿರುವ 21 ಪಕ್ಷಗಳ ಸಂಸದರ ತಂಡ ಶನಿವಾರ ಮಣಿಪುರಕ್ಕೆ ಭೇಟಿ ನೀಡಿ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಮತ್ತು ಸಂಸತ್ತಿಗೆ ಶಿಫಾರಸುಗಳನ್ನು ಮಾಡಲಿದೆ ಎಂದು ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌದರಿ ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌದರಿ, ಗೌರವ್‌ ಗೊಗೊಯಿ, ಟಿಎಂಸಿಯ ಸುಶ್ಮಿತಾ ದೇವ್‌, ಜೆಎಂಎಂನ ಮಹುವಾ ಮಜ್ಹಿ, ಡಿಎಂಕೆಯ ಕನಿಮೋಳಿ, ಎನ್‌ಸಿಪಿಯ ವಂದನಾ ಚೌಹಾಣ್, ಆರ್‌ಎಲ್‌ಡಿಯ ಜಯಂತ್‌ ಚೌದರಿ, ಆರ್‌ಜೆಡಿಯ ಮನೋಜ್‌ ಕುಮಾರ್‌, ಆರ್‌ಎಸ್‌ಪಿಯ ಎನ್‌. ಕೆ ಪ್ರೇಮಚಂದ್ರನ್‌ ಮತ್ತು ವಿಸಿಕೆಯ ತಿರುಮಾವಳನ್‌ ನಿಯೋಗದಲ್ಲಿದ್ದಾರೆ.

LEAVE A REPLY

Please enter your comment!
Please enter your name here