ಸೌಜನ್ಯ ಪ್ರಕರಣ – ಎಸ್.ಐ.ಟಿ ತನಿಖೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಸದಸ್ಯರಿಂದ ಸಿಎಂ ಭೇಟಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪ್ರಗತಿಪರ ಸಂಘಟನೆಗಳ ಸದಸ್ಯರು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಎಸ್.ಐ.ಟಿ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿದ್ದಾರೆ.

ಮನವಿಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ನಿಯೋಗದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಕೆ.ಎಸ್.ವಿಮಲಾ, ಗೌರಮ್ಮ, ಲಕ್ಷ್ಮಿ ಪ್ರಭಾ ಬೆಳವಂಗಲ, ಡಾ. ಲೀಲಾ ಸಂಪಿಗೆ, ದೇವಿ, ರೂತ್ ಮನೋರಮಾ, ಅಕ್ಕೈ ಪದ್ಮಶಾಲಿ, ಅಖಿಲಾ, ಬಿ.ಎಂ. ಭಟ್, ಭೀಮನಗೌಡ, ಬಸಮ್ಮ, ಸುಮತಿ ಹಾಗೂ ಲಹರಿ ಸೇರಿದಂತೆ ನಾನಾ ಪ್ರಗತಿಪರ ಸಂಘಟನೆಗಳ 23 ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here