ಸಿಸಿಬಿ ಕಾರ್ಯಾಚರಣೆ – ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರ ಬಂಧನ

ಮಂಗಳೂರು: ಅಕ್ರಮ ಪಿಸ್ತೂಲು ಹೊಂದಿದ್ದ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಬೈಕೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಪಿಸ್ತೂಲನ್ನು ಇರಿಸಿಕೊಂಡು ತಿರುಗಾಡುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್ ಹಾಗೂ ಯಶವಂತ ಕುಮಾರ್ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅವರಿಂದ ಒಂದು ಪಿಸ್ತೂಲ್, ಎರಡು ಮೊಬೈಲ್ ಫೋನ್, ಹೀರೋ ಹೋಂಡಾ ಬೈಕ್ ಸೇರಿದಂತೆ ಒಟ್ಟು 1,45,000 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here