ವಿಟ್ಲ: ಅತ್ಯಾಚಾರ ಪ್ರಕರಣ – ಐದನೇ ಆರೋಪಿಯ ಬಂಧನ – ನ್ಯಾಯಾಲಕ್ಕೆ ಹಾಜರು

ಮಂಗಳೂರು(ವಿಟ್ಲ): ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಕೇರಳ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ. ನೊಂದ ಯುವತಿ ನೀಡಿದ ದೂರಿನಲ್ಲಿ ಐದು ಮಂದಿಯ ಹೆಸರನ್ನು ಉಲ್ಲೇಖಿಸಿದ್ದು, ಭಾನುವಾರ ಮೂರು ಮಂದಿಯನ್ನು ಬಂಧಿಸಿದ್ದು, ಮತ್ತೋರ್ವನನ್ನು ಸೋಮವಾರ ಬಂಧಿಸಲಾಗಿತ್ತು. ಓರ್ವನನ್ನು ಮಂಗಳವಾರ ಬಂಧಿಸಲಾಗಿದೆ. ಒಟ್ಟು ಐದು ಮಂದಿಯನ್ನು ಬಂಧಿಸಿರುವ ಪೊಲೀಸರು ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

LEAVE A REPLY

Please enter your comment!
Please enter your name here