ದ.ಕ ದಲ್ಲಿ ಮತ್ತೊಂದು ಅನೈತಿಕ ಪೊಲೀಸ್ ಗಿರಿ

ಮಂಗಳೂರು: ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ರಿಕ್ಷಾ ಚಾಲಕನಿಗೆ ತಂಡವೊಂದು ತೀವ್ರ ಹಲ್ಲೆ ನಡೆಸಿದ ಘಟನೆ ಆ.2ರ ರಾತ್ರಿ ನಡೆದಿದೆ. ಉಜಿರ ಹಳೆಪೇಟೆ ನಿವಾಸಿ ಮುಹಮ್ಮದ್ ಆಶಿಕ್(22) ಹಲ್ಲೆಗೊಳಗಾದ ಯುವಕ. ಆಶಿಕ್ ತನ್ನ ಆಟೋದಲ್ಲಿ ರಾತ್ರಿ ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆ ಹೋಗಿ ಹಿಂದಿರುಗುತ್ತಿದ್ದ ವೇಳೆ ಈ ಹಲ್ಲೆ ನಡೆದಿದೆ.

ಉಜಿರೆ ಖಾಸಗಿ ಕಾಲೇಜಿನಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದ ಬೆಂಗಳೂರು ಮೂಲದ ಯುವತಿ ಪರೀಕ್ಷೆ ಮುಗಿಸಿ ಬೆಂಗಳೂರಿಗೆ ತೆರಳಲು ಪರಿಚಯಸ್ಥ ಆಟೋ ಚಾಲಕನಿಗೆ ಕರೆ ಮಾಡಿ ಉಜಿರೆಯಿಂದ ಧರ್ಮಸ್ಥಳ ಬಸ್‌ ನಿಲ್ದಾಣಕ್ಕೆ ಆತನ ಆಟೋದಲ್ಲಿ ತೆರಳಿದ್ದಳು. ರಾತ್ರಿ 9 ಗಂಟೆ ವೇಳೆಗೆ ಯುವತಿಯನ್ನು ಬಸ್‌ ನಿಲ್ದಾಣಕ್ಕೆ ಡ್ರಾಪ್‌ ಮಾಡಿ ಹಿಂದಿರುಗುವ ವೇಳೆ ಅಪರಿಚಿತ 4 ಮಂದಿ ಯುವಕರ ತಂಡ ನಿನಗೆ ಹಿಂದೂ ಯುವತಿಯರೇ ಬೇಕಾ ? ಎಂದು ಬೆದರಿಕೆ ಹಾಕಿ ಯದ್ವಾತದ್ವ ಹಲ್ಲೆ ನಡೆಸಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದ ಮುಹಮ್ಮದ್ ಆಶಿಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here